ಬೆಳ್ತಂಗಡಿ :ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಜಿಯವರ ನೇತೃತ್ವದ ಎನ್. ಡಿ. ಎ. ಮೈತ್ರಿಕೂಟ ಮೂರನೇ ಬಾರಿಗೆ ಜನಾದೇಶ ಪಡೆದುಕೊಂಡಿದ್ದಕ್ಕೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ವಿಜಯಶಾಲಿಗಳಾಗಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಯಂತ್ರ ದುರುಪಯೋಗಪಡಿಸಿಕೊಂಡು ಅಪವಾದ ಅಪಪ್ರಚಾರಗಳ ನಡುವೆ ನಡೆಸಿದ ಈ ಚುನಾವಣೆಯಲ್ಲಿ ಕರಾವಳಿಯ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಸರಸಗಟಾಗಿ ತಿರಸ್ಕರಿಸಿ ಹಿಂದುತ್ವದ ಭದ್ರಕೋಟೆಯನ್ನು ಪುಡಿಗಟ್ಟಲು ಅಸಾಧ್ಯವೆಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿರುತ್ತಾರೆ.
ಪ್ರಥಮ ಬಾರಿಗೆ ಲೋಕಸಭೆಯನ್ನು ಪ್ರವೇಶಸಲಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ. ಬೆಳ್ತಂಗಡಿಯಲ್ಲಿ 2019,2023 ಹಾಗೂ 2024 ರ ಸಾರ್ವತ್ರಿಕ ಲೋಕಸಭೆ ಚುನಾವಣೆಯಯಲ್ಲಿ ಸತತವಾಗಿ ಬಿಜೆಪಿಯ ಮತಗಳಿಕೆಯನ್ನು ಒಂದು ಲಕ್ಷಕ್ಕೂ ಮಿಗಿಲಾಗಿ ನೀಡಿ “ತ್ರೀಸ್ ರೀ ಬಾರ್ ಏಕ್ ಲಾಕ್ ಪಾರ್” ಮಾಡಿದ ಮತದಾರ ಬಾಂಧವರಿಗೆ ಮನದಾಳದ ಕೃತಜ್ಞತೆಯನ್ನು ಸಲ್ಲಿಸುವುದಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.