Home ಸ್ಥಳೀಯ ಸಮಾಚಾರ ಕೆ ಪಿ ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿಭಾಗ : ವಿದ್ಯಾರ್ಥಿ ಸರಕಾರಕ್ಕೆ ಪ್ರಮಾಣವಚನ ಬೋಧನೆ

ಕೆ ಪಿ ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿಭಾಗ : ವಿದ್ಯಾರ್ಥಿ ಸರಕಾರಕ್ಕೆ ಪ್ರಮಾಣವಚನ ಬೋಧನೆ

201
0

ಪೂಂಜಾಲಕಟ್ಟೆ; ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕೆ ಚುನಾವಣೆಯನ್ನು ನಡೆಸಲಾಯಿತು. ಚುನಾವಣಾ ಪ್ರಕ್ರಿಯೆ ತಂತ್ರಜ್ಞಾನವನ್ನು ಬಳಸಿ ನೆರವೇರಿಸಲಾಯಿತು. ಚುನಾವಣೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕ ಮತ್ತು ವಿದ್ಯಾರ್ಥಿ ಪ್ರತಿಪಕ್ಷ ನಾಯಕ ಹಾಗೂ ಉಪನಾಯಕ ಹುದ್ದೆಗೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಸರಳತೆಯೊಂದಿಗೆ ಚುನಾವಣಾ ಪದ್ಧತಿಯಂತೆ ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂದೆ ಪಡೆಯಲು ಅವಕಾಶ, ಅಂತಿಮ ಕಣದಲ್ಲಿರುವವರ ಸ್ಪರ್ದಾಳುಗಳ ಪಟ್ಟಿ, ಈ ರೀತಿ ಎಲ್ಲಾ ಹಂತಗಳನ್ನು ಕ್ರಮವತ್ತಾಗಿ ನಡೆಸಲಾಯಿತು. ಬಳಿಕ ವಿಜೇತ ಅಭ್ಯರ್ಥಿಗಳನ್ನು ಪ್ರಕಟಿಸಿದ ನಂತರ ಸಂಸ್ಥೆಯ ಉಪ ಪ್ರಾಂಶುಪಾಲರಾದ ಉದಯಕುಮಾರ್ ಬಿ ಯವರು ಪ್ರಮಾಣವಚನವನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.
ವಿದ್ಯಾರ್ಥಿ ಸರಕಾರ ಮಾಡಬೇಕಾದ ಕರ್ತವ್ಯಗಳ ಬಗ್ಗೆ ವಿವರವಾಗಿ ವಿಚಾರಗಳನ್ನು ಹೇಳಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರ ಬಳಗ ಸರ್ವ ರೀತಿಯ ಸಹಕಾರವನ್ನು ನೀಡಿದರು.
ಶಾಲಾ ಮುಖ್ಯಮಂತ್ರಿಯಾಗಿ
ಸಂಜನಾ ಎ- 10ಇ
ಉಪಮುಖ್ಯಮಂತ್ರಿಯಾಗಿ- ಡೀತಮ್ -9 ಎಂ
ಕ್ರೀಡಾ ಮಂತ್ರಿಯಾಗಿ -ನಿಖಿಲ್ ದೇವಾಡಿಗ 10 ಸಿ
ಉಪ ಕ್ರೀಡಾಮಂತ್ರಿಯಾಗಿ- ಶಶಾಂಕ್ 9 ಎಂ
ಸ್ವಚ್ಛತಾ ಮಂತ್ರಿಯಾಗಿ – ಧನುಷ್ 10 ಸಿ
ಉಪ ಸ್ವಚ್ಛತಾ ಮಂತ್ರಿಯಾಗಿ- ರೇಖಾ 9ಎ
ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮಂತ್ರಿಯಾಗಿ – ಸುಧೀಶಾ 10 ಡಿ
ಉಪಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಮಂತ್ರಿಯಾಗಿ – ಪ್ರೀತಮ್ ಕೆ ವಿ 9 ಬಿ
ಆರೋಗ್ಯ ಮತ್ತು ಆಹಾರ ಮಂತ್ರಿಯಾಗಿ – ನಿಖಿಲ್ 10 ಬಿ
ಉಪ ಆರೋಗ್ಯ ಮತ್ತು ಆಹಾರ ಮಂತ್ರಿಯಾಗಿ -9 ಎ
ವಾರ್ತಾ ಮಂತ್ರಿಯಾಗಿ -ಪೂಜಾ 10 ಈ
ಉಪ ವಾರ್ತಾ ಮಂತ್ರಿಯಾಗಿ-ಸಂಸ್ಕೃತಿ ನಾಯಕ್ 9 ಇ. ಇವರು ಆಯ್ಕೆಯಾಗಿರುತ್ತಾರೆಂದು ಸಂಸ್ಥೆಯ ಮುಖ್ಯಸ್ಥರಾದ ಉದಯ್ ಕುಮಾರ್ ಬಿ ಇವರು ತಿಳಿಸಿರುತ್ತಾರೆ

LEAVE A REPLY

Please enter your comment!
Please enter your name here