ಬೆಳ್ತಂಗಡಿ; ವಿಧಾನ ಪರಿಷತ್ ಸದಸ್ಯ ಐವಾನ್ ಡಿ ಸೋಜ ಅವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಲಾರೆನ್ಸ್ ಮುಕ್ಕುಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬೆಳ್ತಂಗಡಿ ಧರ್ಮಾಧ್ಯ ಕ್ಷರ ನಿವಾಸಕ್ಕೆ ಶನಿವಾರ ಭೇಟಿ ನೀಡಿದ ಐವಾನ್ ಡಿಸೋಜ ಅವರನ್ನು
ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವತಿಯಿಂದ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಸನ್ಮಾನಿಸಿಸದರು.ಈ ಸಂದರ್ಭದಲ್ಲಿ ಐವಾನ್ ಡಿ ಸೋಜ ಅವರು ಬಿಷಪ್ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಕಾರ್ ಜನರಲ್ ಅ.ವಂ. ಫಾ, ಜೋಸ್ ವಲಿಯಪರಂಬಿಲ್ ಹಾಗೂ ಧರ್ಮಗುರುಗಳು ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.


