Home ಅಪಘಾತ ನೆಲ್ಯಾಡಿ; ನದಿಗೆ ಬಿದ್ದ ಬಸ್ ಚಾಲಕ ಸ್ಥಳದಲ್ಲಿಯೇ ಸಾವು

ನೆಲ್ಯಾಡಿ; ನದಿಗೆ ಬಿದ್ದ ಬಸ್ ಚಾಲಕ ಸ್ಥಳದಲ್ಲಿಯೇ ಸಾವು

55
0

ನೆಲ್ಯಾಡಿ; ಬೆಂಗಳೂರು ಮೂಲದ ಖಾಸಗಿ ಸ್ವೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.

ಶುಕ್ರವಾರ ತಡರಾತ್ರಿ 11 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಗುದ್ದಿದ ರಭಸಕ್ಕೆ ಬಸ್‌ನ ಡ್ರೈವರ್ ಬಸ್‌ನಿಂದ ಹೊರಗಡ ಎಸೆಯಲ್ಪಟ್ಟು ಬಸ್ಸಿನ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದೆ.

ಈ ಖಾಸಗಿ ಸ್ಲಿಪರ್ ಬಸ್ ಗುರುವಾರ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ನಿನ್ನೆ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್- ಅಪ್ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಗೋಕರ್ಣದಿಂದ ಡ್ರೈವ‌ರ್ ಮತ್ತು ಸಹ-ಡ್ರೈವರ್ ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಹೆಚ್ಚಿನ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ

LEAVE A REPLY

Please enter your comment!
Please enter your name here