Home ಅಪರಾಧ ಲೋಕ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.

ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.

52
0

ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಪೂರ್ಣ
ಕೊಳೆತ ಸ್ಥಿತಿಯಲ್ಲಿ ಮೃತದೆಹವಿದ್ದು ಕೆಲಸ ಮಾಡುವವರು ಮೃತದೇಹವನ್ನು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ
ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ , ಸಬ್ ಇನ್ಸ್‌ಪೆಕ್ಟರ್ ಮುರಳೀಧರ್ ನಾಯ್ಕ್ ಸೇರಿದಂತೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು , ಗುರುತಿಸಲು ಅಸಾಧ್ಯವಾಗಿದೆ. ಪೊರನಿಕ್ಸ್ ಲ್ಯಾಬ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ , ಡಿಎನ್ಎ ಪರೀಕ್ಷೆ ನಡೆಸಬೇಕಾಗಿದೆ.
ಸ್ಥಳೀಯರೇ ಯಾರಾದರೂ ಇರಬೇಕು ಎಂಬ ಅನುಮಾನ ವ್ಯಕ್ತವಾಗುತ್ತಿದೆ ಈ ನಿಟ್ಟಿನಲ್ಲಿಯು ಪರಿಶೀಲನೆ ನಡೆಸಲಾಗುತ್ತಿದೆ.
ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ

LEAVE A REPLY

Please enter your comment!
Please enter your name here