Home ಸ್ಥಳೀಯ ಸಮಾಚಾರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ರಕ್ಷಿತ್ ಶಿವರಾಂ ಅವರಿಗೆ ದಯಾ ಸಂಸ್ಥೆಯಿಂದ ಅಭಿನಂದನೆ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ರಕ್ಷಿತ್ ಶಿವರಾಂ ಅವರಿಗೆ ದಯಾ ಸಂಸ್ಥೆಯಿಂದ ಅಭಿನಂದನೆ

0

ಬೆಳ್ತಂಗಡಿ; ಅಂಧ ,ವಾಕ್ ಮತ್ತು ಶ್ರವಣ ದೋಷ ಹೊಂದಿರುವ ಹಾಗೂ ಹಲವು ನ್ಯೂನತೆಗಳಿಂದ ಕೂಡಿದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ 150 ಮಕ್ಕಳಿಗೆ ವಿದ್ಯಾಭ್ಯಾಸ ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತ ಬರುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ ಕೊಯ್ಯೂರು ಇವರ ಸೇವೆಯನ್ನು ಗುರುತಿಸಿ ಸರ್ಕಾರ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು.
ಪ್ರಶಸ್ತಿಗೆ ಆಯ್ಕೆಯಾಗಲು ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಇಂದು ಕಛೇರಿಯಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಫಾದರ್ ವಿನೋದ ಮಸ್ಕರೇನ್ಸ್ , ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಕ್ಷಿತ್ ಶಿವರಾಂ ಅವರು ಫಾ. ವಿನೋದ್ ಅವರನ್ನು ಅಭಿನಂದಿಸಿದರು.

ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಪಿ ಟಿ ಸೆಬಾಸ್ಟಿಯನ್ ,ಹಾಗೂ ಪ್ರಮುಖರಾದ ಮಹಮ್ಮದ್ ಹನಿಫ್ ಉಜಿರೆ ,ಕುಶಾಲಪ್ಪ ಗೌಡಶಿರ್ಲಾಲು ಮಹಮ್ಮದ್ ಸಿದ್ದಿಕ್ ಕೊಯ್ಯೂರು, ಕೊರಗಪ್ಪ ಪೂಜಾರಿ ಸುಲ್ಕೇರಿ
ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version