

ಬೆಳ್ತಂಗಡಿ : ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ಮಧ್ಯರಾತ್ರಿ ಎರಡು ಬೈಕ್ ನಲ್ಲಿ ಬಂದ ಅಪರಿಚಿತರು ಮೀನು ಸಾಗಾಟದ ಲಾರಿ ತಡೆದು ನಗದು ದೋಚಿದ ಘಟನೆ ವರದಿಯಾಗಿದೆ. ಲಾರಿ ಚಾಲಕನ ಬದಿಯ ಗ್ಲಾಸ್ ಒಡೆದು ಚಾಲಕನಿಗೆ ಥಳಿಸಿ 1.61 ಲಕ್ಷ ರೂ. ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ವಾಹನದ ಚಾಲಕ ಸಲಾಂ ಬಣಕಲ್ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡಿದ್ದಾನೆ.
ಬಣಕಲ್ ಪೊಲೀಸರು ಪ್ರಕರಣದ ಪರಿಶೀಲನೆ ನಡೆಸುತ್ತಿದ್ದಾರೆ
