Home ಅಪರಾಧ ಲೋಕ ಬೆಳ್ತಂಗಡಿ : ಅಪಘಾತ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿ ಕೊಂಡಿದ್ದ  ಲಾರಿ ಚಾಲಕ ಸಿದ್ದಿಕ್ ಬಂಧನ

ಬೆಳ್ತಂಗಡಿ : ಅಪಘಾತ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿ ಕೊಂಡಿದ್ದ  ಲಾರಿ ಚಾಲಕ ಸಿದ್ದಿಕ್ ಬಂಧನ

43
0

ಬೆಳ್ತಂಗಡಿ : 2006 ರಲ್ಲಿ ನಡೆದ ಲಾರಿಯ ಅಜಾಗರೂಕತೆಯ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣ ಸಂಬಂಧ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಲ್ಲಿ ಒಂದು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸುತ್ತು.ಬಳಿಕ ಈ ಪ್ರಕರಣದ ವಿರುದ್ಧ ಲಾರಿ ಚಾಲಕ ಚಾರ್ಮಾಡಿ ಸಿದ್ದಿಕ್(40) ಹೈಕೋರ್ಟ್ ವರೆಗೆ ಅಪೀಲು ಹೋಗಿದ್ದು ಅಲ್ಲಿ ಕೂಡ ಬೆಳ್ತಂಗಡಿ ನ್ಯಾಯಾಲಯ ತೀರ್ಪನ್ನು ಎತ್ತಿ ಹಿಡಿದು ಶಿಕ್ಷೆ ಖಾಯಂ ಮಾಡಿತ್ತು ಬಳಿಕ ಲಾರಿ ಚಾಲಕ ಆರೋಪಿ ತಲೆಮರೆಸಿಕೊಂಡಿದ್ದು. ಇದೀಗ ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಪ್ರಕರಣ 117/2006 ಕಲಂ, 279, 304 (ಎ) ಸುಮಾರು 19 ವರ್ಷದ ಹಿಂದಿನ ಪ್ರಕರಣದಲ್ಲಿ ಶಿಕ್ಷೆ ಪ್ರಕರಟವಾದ ಬಳಿಕ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿ ಸಿದ್ದಿಕ್(40) ಎಂಬಾತನನ್ನು ಫೆ.6 ರಂದು ಬಂಟ್ವಾಳ ಪೊಲೀಸ್ ಉಪ ಅಧಿಕ್ಷಕರು ವಿಜಯ್ ಪ್ರಸಾದ್ ರವರ ನಿರ್ದೇಶನದಂತೆ, ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ ಮತ್ತು ಯಲ್ಲಾಪ್ಪ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವ್ರಷಭ , ಚರಣ್, ದರೇಶ್ ರವರು ಬಂಧಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು.‌ನ್ಯಾಯಾಲಯ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದಾರೆ.

LEAVE A REPLY

Please enter your comment!
Please enter your name here