

ಬೆಳ್ತಂಗಡಿ; ಗುರುವಾಯನಕೆರೆಯ ಕೆರೆಯಲ್ಲಿ ಅಪರಿಚಿತ ಅಪರಿಚಿತ ವ್ಯಕ್ತಿಯ ಮೃಯದೇಹ ಭಾನುವಾರ ಪತ್ತೆಯಾಗಿದೆ.

ಸ್ಥಳೀಯರು ಮೃತದೇಹವನ್ನು ಗಮನಿಸಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬಳಿಕ ಸಾರ್ವಜನಿಕರ ಸಹಕಾರದೊಂದಿಗೆ ಮೃತದೇಹವನ್ನು ಕೆರೆಯಿಂದ ಮೇಲಕ್ಕೆ ಎತ್ತಲಾಯಿತು. ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಬೆಳ್ತಂಗಡಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ
ಮೃದದೇಹದ ಗುರುತು ಪತ್ತೆಗೆ ಕ್ರಮ ಪ್ರಯತ್ನಿಸಲಾಗುತ್ತಿದೆ.
