


ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕನ್ಯಾಡಿಯ ಸೇವಾನಿಕೇತನಕ್ಕೆ ಫೆಬ್ರವರಿ 8 ರಂದು ಭೇಟಿ ನೀಡಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಸಂಸ್ಥೆಯ ಬಗ್ಗೆ ಮಾತನಾಡಿ, ಸಾಮಸ್ಥೆಯ ಕಾರ್ಯ ನಿರ್ವಹಣೆಯ ಬಗ್ಗೆ ವಿವರಿಸಿದರು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ಧನಸಹಾಯ ಮಾಡುವಂತೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಸಂಸದರು ಸಹಕಾರದ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸೇವಾಧಾಮ ಸಂಚಾಲಕರಾದ ಕೆ. ಪುರಂದರ ರಾವ್, ಸೇವಾಭಾರತಿ ಟ್ರಸ್ಟಿ ಬಿ. ಕೃಷ್ಣಪ್ಪ ಗುಡಿಗಾರ್, ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ಭಾರತೀಯ ಮಜ್ದೂರ್ ಸಂಘದ ರಾಜ್ಯಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ಸಂಸ್ಥೆಯ ಸ್ವಯಂಸೇವಕರಾದ ಚಂದನ್ ಗುಡಿಗಾರ್ , ಜಯರಾಜ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
