

ಬೆಳ್ತಂಗಡಿ: ಮಾಲಾಡಿ ಕೊಲ್ಪದ ಬೈಲು ಸಮೀಪದ ತಿರುವಿನಲ್ಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದ ಘಟನೆ ಫೆ 21ರಂದು ಮುಂಜಾನೆ ನಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
