

ಬೆಳ್ತಂಗಡಿ; ಪಿಲಿಗೂಡು ಬಾರ್ಯಾ ಬನ್ನೆಂಗಳದಲ್ಲಿ ನೂತನ ವಾಗೀ ರಚನೆ ಯಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಧರ್ಮಾಧಿಕಾರಿ ಶ್ರೀ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಕೊಡ ಮಾಡಿದ ಎರಡು ಲಕ್ಷ ಅನುದಾನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ 1 ಜಿಲ್ಲಾ ಶ್ರೀ ಮಹಾಬಲ ಕುಲಾಲ್ ರವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು
ತಾಲೂಕು ಜನಜಾಗೃತಿ
ಕಾರ್ಯಕಾರಿಣಿ ಸಮಿತಿ ಸದಸ್ಯರೂ ಹಾಗೂ ಬನ್ನೆಂಗಳ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಗುಣಕರ್ ಅಗ್ನಾಡಿ, ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ಬಾರ್ಯ ಗುರುವಾಯನೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ಶ್ರೀ ದಯಾನಂದ ಪೂಜಾರಿ, ಸೇವಾಪ್ರತಿನಿಧಿ ಶ್ರೀಮತಿ ವಿಶಾಲಾಕ್ಷಿ ಒಕ್ಕೂಟದ ಅಧ್ಯಕ್ಷ ರಾದ ಮೋಹನ್ ಗೌಡ,ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ರಾದ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು
