

ಕೊಕ್ಕಡ; ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಬಂದಾರು ಗ್ರಾಮವನ್ನು ಸಂಪರ್ಕಿಸಲು ಕೊಕ್ಕಡ ಗ್ರಾಮದ ಮೈಪಾಲ ಎಂಬಲ್ಲಿ ರೂ.72 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೈಪಾಲ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿಯನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,ಕೊಕ್ಕಡ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಯೋಗೀಶ್ ಆಳಂಬಿಲ, ಕೊಕ್ಕಡ ಪಂಚಾಯತ್ ಸದಸ್ಯರಾದ ವಿಶ್ವನಾಥ, ಬಿಜೆಪಿ ಮಂಡಲ ಎಸ್. ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ ಕುರ್ಲೆ,ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಮಹಾಬಲ ಗೌಡ ಬಂದಾರು, ಬೆಳ್ತಂಗಡಿ ಎ.ಪಿ.ಎಮ್.ಸಿ ಮಾಜಿ ನಿರ್ದೇಶಕರಾದ ಹೊನ್ನಪ್ಪ ಗೌಡ ಸೋಣಕುಮೇರು, ಸ್ಥಳೀಯ ನಿವಾಸಿ ತಿಮ್ಮಪ್ಪ ಮೈಪಾಲ, ಮಾದಪ್ಪ ಕುರ್ಲೆ ಅನೇಕ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
