Home ಅಪರಾಧ ಲೋಕ ಬಂದಾರು; ಮನೆಯಿಂದ ಪೇಟೆಗೆಂದು ಹೋಗಿದ್ದ ವ್ಯಕ್ತಿಯ ಮೃತದೇಹ ಬಸ್ ನಿಲ್ದಾಣದಲ್ಲಿ ಪತ್ತೆ

ಬಂದಾರು; ಮನೆಯಿಂದ ಪೇಟೆಗೆಂದು ಹೋಗಿದ್ದ ವ್ಯಕ್ತಿಯ ಮೃತದೇಹ ಬಸ್ ನಿಲ್ದಾಣದಲ್ಲಿ ಪತ್ತೆ

7
0

ಬೆಳ್ತಂಗಡಿ; ಬಂದಾರಿನಲ್ಲಿ ಮನೆಯಿಂದ ಪೇಟೆಗೆಂದು ಹೋದ ವ್ಯಕ್ತಿಯ ಮೃತದೇಹ ಪದ್ಮುಂಜ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.
ಮೃತ ವ್ಯಕ್ತಿ ಬಂದಾರು ಗ್ರಾಮದ ನೂಜಿ ಮನೆ ನಿವಾಸಿ ಚೆನ್ನಪ್ಪ ಪರವ (58) ಎಂಬವ ರಾಗಿದ್ದಾರೆ.
ಮಾ 11ರಂದು ಚೆನ್ನಪ್ಪ ಪರವ ಉಪ್ಪಿನಂಗಡಿ ಗೆ ಹೋಗುವುದಾಗಿ ಹೇಳಿ ಹೊರಟಿದ್ದರು. ಅವರು ಮನೆಗೆ ಹಿಂತಿರುಗಿರಲಿಲ್ಲ. ಮಾ12 ರಂದು ಅವರು ಪದ್ಮುಂಜ ಬಸ್ ನಿಲ್ದಾಣದಲ್ಲಿ ಬಿದ್ದುಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದು ಅಲ್ಲಿಗೆ ತೆರಳಿ ನೋಡಿದಾಗ ಅವರು ಮೃತಪಟ್ಟಿರುವುದು ಕಂಡುಬಂದಿದೆ. ವಿಪರೀತ ಮದ್ಯಸೇವನೆಯ ಚಟ ಹೊಂದಿದ್ದ ಅವರು ಕುಡಿದು ಬಸ್ ನಿಲ್ದಾಣದಲ್ಲಿ ಮಲಗಿದ್ದು ಹೃದಯಾಘಾತ ಅಥವಾ ಇನ್ಯಾವುದೋ ಕಾರಣಕ್ಕೆ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದೆ. ಘಟನೆಯ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here