Home ರಾಜಕೀಯ ಸಮಾಚಾರ ಅಳದಂಗಡಿ; ಮಳೆಯಿಂದ ಮನೆಗೆ ಹಾನಿ, ರಕ್ಷಿತ್ ಶಿವರಾಂ ಭೇಟಿ

ಅಳದಂಗಡಿ; ಮಳೆಯಿಂದ ಮನೆಗೆ ಹಾನಿ, ರಕ್ಷಿತ್ ಶಿವರಾಂ ಭೇಟಿ

26
0

ಬೆಳ್ತಂಗಡಿ; ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಇತ್ತೀಚೆಗೆ ಬಾರಿ ಗಾಳಿ , ಮಳೆಗೆ ಮನೆಯೊಂದು ಸಂಪೂರ್ಣ ಕುಸಿದಿದ್ದು , ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಹಾಯಹಸ್ತ ನೀಡಿ ತಾತ್ಕಾಲಿಕ ಮನೆ ದುರಸ್ತಿಗೆ ನೆರವಾದರು.

ಇತ್ತೀಚೆಗೆ ಅಳದಂಗಡಿ ಸಮೀಪದ ಪಿಲ್ಯದ ವಿಮಲ ಮಡಿವಾಳ ಎಂಬವರ ಮನೆ ತೀವ್ರ ಸ್ವರೂಪದ ಗಾಳಿ ಮಳೆಗೆ ಸಂಪೂರ್ಣ ಕುಸಿದಿತ್ತು. ಈ ಬಗ್ಗೆ  ಸ್ಥಳೀಯ ಕಾಂಗ್ರೆಸ್ ಪಕ್ಷದ ‌ನಾಯಕ ಸಂತೋಷ್ ಪೂಜಾರಿ ನಿನ್ನಿಕಲ್ಲು ರವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರ ಗಮನ ಸೆಳೆದರು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ರಕ್ಷಿತ್ ಶಿವರಾಂ ರವರು ಸಹಾಯಹಸ್ತ ನೀಡಿ , ಸಂತೋಷ್ ನಿನ್ನಿಕಲ್ಲು ರವರ ನೇತೃತ್ವದಲ್ಲಿ ಮನೆ ದುರಸ್ತಿ ಮಾಡಲು ಸೂಚಿಸಿದರು ‌. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕ , ಉದ್ಯಮಿ ಪ್ರವೀಣ್ ಪೆರ್ನಾಂಡೀಸ್ ಹಳ್ಳಿಮನೆ , ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೋ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here