


ಬೆಳ್ತಂಗಡಿ: ವೇಣೂರು ಪೋಲಿಸ್ ಠಾಣಾ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲು ಸೂಳಬೆಟ್ಟು ಹೊಳೆಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿದ್ದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿರುವ ಘಟನೆ ಮಾ.22 ರಂದು ಸಂಜೆ ನಡೆದಿದೆ.
ಠಾಣೆಗೆ ಬಂದ ಖಚಿತ ಮಾಹಿತಿ ಮೇರೆಗೆ ವೇಣೂರು ಠಾಣಾ ಪಿ ಎಸ್ ಐ ಶ್ರೀಶೈಲಾ ಡಿ ಮತ್ತು ಸಿಬ್ಬಂದಿಗಳಾದ ರವೀಂದ್ರ ಬಸವರಾಜ್ ಸತ್ಯ ಪ್ರಕಾಶ್ ಜತೆ ದಾಳಿ ಮಾಡಿದ್ದು ಪಿಕಪ್ ವಾಹನಕ್ಕೆ ಮರಳು ತುಂಬಿಸುವ ಸಂದರ್ಭದಲ್ಲಿ ದಾಳಿ ನಡೆದಿದೆ. ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
