


ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಗುಡುಗು,ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ಗುರುವಾಯನಕೆರೆಯಿಂದ ಕಕ್ಕಿಂಜೆ ವಿದ್ಯುತ್ ಪೂರೈಸುವ 33 ಕೆವಿ ಟವರ್ ನ ಮೇಲೆ ಮರ ಉರುಳಿ ಬಿದ್ದು ಟವರ್ ಗೆ ಹಾನಿಯಾಗಿದೆ.ಇದರಿಂದ ಕಕ್ಕಿಂಜೆ ವಿದ್ಯುತ್ ಸಬ್ ಸ್ಟೇಷನ್ ವ್ಯಾಪ್ತಿಯ ಚಾರ್ಮಾಡಿ, ನೆರಿಯ, ತೋಟತ್ತಾಡಿ, ಚಿಬಿದ್ರೆ ಮುಂಡಾಜೆ ಕಲ್ಮಂಜ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಮೊದಲಾದ ಗ್ರಾಮಗಳ ಸಾವಿರಾರು ಗ್ರಾಹಕರಿಗೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆಯುಂಟಾಗಿದೆ.
