Home ಶಾಲಾ ಕಾಲೇಜು ಪದ್ಮುಂಜ ಸರಕಾರಿ ಶಾಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಎಸ್.ಎಸ್.ಎಲ್.ಸಿ ಪರೀಕ್ಷೆಯಿಂದ ಹೊರಗಿಟ್ಟ ಶಿಕ್ಷಕರು! ಎಸ್.ಡಿ.ಎಂ.ಸಿ ಸಮನ್ವಯ...

ಪದ್ಮುಂಜ ಸರಕಾರಿ ಶಾಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಎಸ್.ಎಸ್.ಎಲ್.ಸಿ ಪರೀಕ್ಷೆಯಿಂದ ಹೊರಗಿಟ್ಟ ಶಿಕ್ಷಕರು! ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ ಆರೋಪ

24
0

ಬೆಳ್ತಂಗಡಿ: ತಾಲೂಕಿ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿಸಿರುವ ಘಟನೆ ವರದಿಯಾಗಿದ್ದು ಈ ಬಗ್ಗೆ ಮಕ್ಕಳು ಸ್ವತಹ ಮಕ್ಕಳ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ

ಖಾಸಗಿ ಶಾಲೆಗಳು 100% ಫಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಬತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳು ಸಹಜವಾಗಿಯೇ ಹಲವೆಡೆಯಿಂದ ಕೇಳಿ ಬರುತ್ತಿರುವಾಗ ಇದೀಗ ಸರಕಾರಿ ಶಾಲೆಯು ಪರೀಕ್ಷೆಗೆ ಅವಕಾಶ ನಿರಾಕರಿಸಿರುವ ಘಟನೆ ಬೆಳಕಿಗೆ ಬಂದಿದೆ.
ಎಲ್ಲಾ ತರಹದ ಮಕ್ಕಳಿಗೂ ಸಮಾನ ಶಿಕ್ಷಣ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಗೆ ಪೂರಕವಾಗಿ ನಡೆದು ಬರುತ್ತಿರುವ ಸರಕಾರಿ ಶಾಲೆಯಲ್ಲಿ ಇದು ನಡೆದಿರುವುದು ಆಶ್ಚರ್ಯ ಮೂಡಿಸಿದೆ, ಈ ಶೈಕ್ಷಣಿಕ ವರ್ಷದಲ್ಲಿ ಪದ್ಮುಂಜದ ಸರಕಾರಿ ಶಾಲೆಯ ಶಿಕ್ಷಕ ವೃಂದ ಕೂಡ 100% ಎನ್ನುವ ಗೀಳಿಗೆ ಬಿದ್ದು ಎರಡು ಹೆಣ್ಣು ಮಕ್ಕಳನ್ನು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎನ್ನುವ ಕಾರಣಕ್ಕೆ ಪರೀಕ್ಷೆಗೆ ಅವಕಾಶ ಕೊಡದೆ ಇರುವುದು ಇದೀಗ ಬಹಿರಂಗ ಗೊಂಡಿದೆ.

ಇದರ ಬಗ್ಗೆ ಖುದ್ದು ಅವಕಾಶ ವಂಚಿತಳಾಗಿರುವ ಹೆಣ್ಣು ಮಗಳು ಮಕ್ಕಳ ಹಕ್ಕುಗಳ ಆಯೋಗ, ಉಪನಿರ್ದೇಶಕರು,ಶಿಕ್ಷಣಾಧಿಕಾರಿ ಹಾಗೂ ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ(ರಿ) ಯ ಸಂಚಾಲಕರಿಗೆ ಪತ್ರ ಬರೆದಿದ್ದು, ಈ ಪತ್ರಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿದೆ.

ವಿದ್ಯಾರ್ಥಿಗಳು ಬರೆದಿರುವ ಪತ್ರಗಳನ್ನು ಗಮನಿಸಿರುವ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ(ರಿ) ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನ ಸೆಳೆದಿದ್ದು
ಇದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ, ತಪ್ಪಿತಸ್ಥರಾದ ಶಿಕ್ಷಕರ ಮೇಲೆ ಕಾನೂನು ಕ್ರಮವನ್ನು ಕೈ ಗೊಳ್ಳುವುದರೊಂದಿಗೆ ಆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ(ರಿ)-ಯ ರಾಜ್ಯ ಸಂಚಾಲಕರಾದ ಮೊಯ್ದಿನ್ ಕುಟ್ಟಿ ಆಗ್ರಹಿಸಿದ್ದಾರೆ

LEAVE A REPLY

Please enter your comment!
Please enter your name here