



ಬೆಳ್ತಂಗಡಿ; ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿಯಾಗಿದ್ದ ಜೋಸೆಫ್ ತೆಕ್ಕೆಕುಟ್ಟ್ (52) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಇವರು ಭಾನುವಾರ ನಿಧನರಾಗಿದ್ದಾರೆ. ಮೃತರು ಪತ್ನಿ ನಾಲ್ವರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಧರ್ಮಸ್ಥಳ ಹಾಗೂ ಕಕ್ಕಿಂಜೆಯಲ್ಲಿ ಕೊಬ್ಬರಿ ಹಾಗೂ ಕೊಬ್ಬರಿ ಎಣ್ಣೆ ಉದ್ಯಮವನ್ನು ನಡೆಸುತ್ತಿದ್ದರು.
