

ಬೆಳ್ತಂಗಡಿ : ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ಮಾ.22 ರಂದು ಬೆಳಗ್ಗೆ ಒಂದುವರೇ ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಪ್ರಕರಣಕ್ಕೆ ರೋಚಕ ತಿರುವು ಲಭಿಸಿದ್ದು ಮಗು ಬೆಳಾಲು ನಿವಾಸಿಯದು ಎಂದು ಬಹಿರಂಗ ಗೊಂಡಿದೆ. ಮಗುವಿನ ತಂದೆ ತಾಯಿಯನ್ನು ಪತ್ತೆ ಹಚ್ಚಿದ ಪೊಲೀಸರು ಇದೀಗ ಮಗುವಿನ ತಂದೆ ಬೆಳಾಲು ನಿವಾಸಿ ರಜತ್ ಗೌಡ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಳಾಲಿನ ಕಡಿನಲ್ಲಿ ಪತ್ತೆಯಾದ ಮಗುವನ್ನು
ಸಾರ್ವಜನಿಕರು ನೋಡಿ ರಕ್ಷಿಸಿ ಆರೈಕೆ ಮಾಡಿ ಧರ್ಮಸ್ಥಳ ಪೊಲೀಸರು ಸಮ್ಮುಖದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ಪುತ್ತೂರು ಅಶ್ರಮಕ್ಕೆ ಹಸ್ತಾಂತರಿಸಿದ್ದರು. ಇದೀಗ ಧರ್ಮಸ್ಥಳ ಪೊಲೀಸರು ಮಗುವಿನ ತಂದೆ ಬೆಳಾಲು ನಿವಾಸಿ ರಜತ್ ಗೌಡ ನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮಗಿವಿನ ತಂದೆ ತಾಯಿಯನ್ನು ಪೊಲೀಸರು ಪತ್ತೆ ಹಚ್ವುತ್ತಿದ್ದಂತೆಯೇ ಇದೀಗ ಇಬ್ಬರು ಕೂಡ ಸ್ವ ಇಚ್ಛೆಯಿಂದ ಒಂದು ವಾರದೊಳಗೆ ಮದುವೆ ಯಾಗುವುದಾಗಿ ಪೋಲಿಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಮುಂದೆ ರಂಜಿತ್ ಗೌಡ ಹಾಗೂ ಕುಟುಂಬ ಮತ್ತು ಯುವತಿ ಕುಟುಂಬವರು ಒಪ್ಪಿರುವುದಾಗಿ ತಿಳಿದು ಬಂದಿದೆ.
ಅಪರಿಚಿತ ಹೆಣ್ಣು ಮಗು ಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರಾದ ಅನ್ನಪೂರ್ಣ ಮಾ.22 ರಂದು ದೂರು ನೀಡಿದ್ದು ಅದರಂತೆ BNS 93 (ಅಪರಿಚಿತ ಮಗುವನ್ನು ಯಾರೋ ಬಿಟ್ಟು ಹೋದ) ಬಗ್ಗೆ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಕಾರ್ಯಾಚರಣೆಗಿಳಿದ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರಾ ಮತ್ತು ತಂಡಕ್ಕೆ ಮಗುವಿನ ತಂದೆಯ ಬಗ್ಗೆ ಸುಳಿವು ಲಭಿಸಿದೆ.
ಇದರ ಬೆನ್ನು ಹತ್ತಿದಾಗ ಆರೋಪಿ ಬಗ್ಗೆ ಖಚಿತ ಮಾಹಿತಿ ಲಭಿಸಿದ್ದು ಎ.2 ರಂದು ರಾತ್ರಿ ಮಗುವಿನ ತಂದೆ ಬೆಳಾಲು ನಿವಾಸಿ ರಂಜಿತ್ ಗೌಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯ ನಿವಾಸಿ ತಿಮ್ಮಪ್ಪ ಗೌಡರ ಮಗ ಧರ್ಮಸ್ಥಳದಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ರಂಜಿತ್ ಗೌಡ (27) ಮತ್ತು ಧರ್ಮಸ್ಥಳ ಗ್ರಾಮದ ಕೊಲಂಗಾಜೆಯ ಮಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಪೊಲೀಸರು ಮಗುವಿನ ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು. ಪುತ್ತೂರು ಆಶ್ರಮದಲ್ಲಿರುವ ಮಗುವನ್ನು ತಂದೆ-ತಾಯಿಗೆ ಕಾನೂನು ಪ್ರಕ್ರಿಯೆ (DNA) ಮುಗಿಸಿದ ಬಳಿಕ ಹಸ್ತಾಂತರಿಸಲ್ಲಿದ್ದಾರೆ.

ರಂಜಿತ್ ಮತ್ತು ಸುಶ್ಮೀತಾ ಪರಸ್ಪರ ಪ್ರೀತಿಸುತ್ತಿದ್ದರು, ಈ ವಿಚಾರ ಎರಡು ಮನೆಯವರಿಗೂ ತಿಳಿದಿರಲಿಲ್ಲ ಎನ್ನಲಾಗಿದೆ. ಈಕೆ ಗರ್ಭಿಣಿಯಾಗಿದ್ದು ಈ ವಿಚಾರ ಯಾರಿಗೂ ಹೇಳದೆ ಇಬ್ಬರು ಮಾತ್ರ ಜಾಗೃತೆ ವಹಿಸಿದ್ದರು ಎನ್ನಲಾಗಿದೆ. ಇದರಿಂದ ಕ್ಲಿನಿಕ್ ಗಳಿಗೆ ಪ್ರತಿ ತಿಂಗಳು ದಂಪತಿಗಳಾಗಿ ಹೋಗುತ್ತಿದ್ದು. ತಾಯಿ ಕಾರ್ಡ್ ಕೇಳಿದ್ದಕ್ಕೆ ಅದು ಮಿಸ್ಸಾಗಿದೆ ಅಂತ ಹೇಳುತ್ತಿದ್ದರು ಎನ್ನಲಾಗಿದೆ. ಉಜಿರೆಯಲ್ಲಿ ಬಾಡಿಗೆ ಮನೆ ಮಾಡಿ ಆಕೆಯನ್ನು ಬಿಟ್ಟಿದ್ದ ವಾರಕ್ಕೆ ಒಮ್ಮೆ ಬಂದು ನೋಡಿ ಹೋಗುತ್ತಿದ್ದು. ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯೂ ನಡೆದಿತ್ತು. ಇದಾದ ಬಳಿಕ ಗುಪ್ತವಾಗಿಯೇ ಮಗುವನ್ನು ಸಾಕಿದ್ದರು ಎನ್ನಲಾಗಿದೆ, ಈ ನಡುವೆ ಇವರಿಬ್ಬರ ನಡುವೆ ವೈಮನಸ್ಯ ಬಂದಿದ್ದು ಆಕೆ ಮಗುವನ್ನು ರಂಜಿತ್ ಕೈಗೆ ಒಪ್ಪಿಸುತ್ತಾಳೆ ಕುಟುಂಬದ ಭಯದಿಂದ ಅಥವಾ ಮದುವೆಯಾಗದ ಕಾರಣ ಹೆದರಿ ಕೊನೆಗೂ ಇಬ್ಬರೂ ಸೇರಿ ಮಗುವನ್ನು ಕಾಡಿಗೆ ಬಿಟ್ಟಿರುವುದಾಗಿ ಹೇಳಿಕೆ ನೀಡಿದ್ದಾರೆ ಅದಲ್ಲದೆ ಎರಡು ಮನೆಗೆ ಪೊಲೀಸ್ ಎಂಟ್ರಿಯಾಗುವವರೆಗೂ ಈ ವಿಚಾರ ಎರಡು ಮನೆಯ ಪೋಷಕರಿಗೆ ಗೊತ್ತಾಗಿಲ್ಲ ಎನ್ನಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಗಳು ತಂದೆ-ತಾಯಿಯ ವಿಚಾರಣೆ ಬಳಿಕ ತಿಳಿದು ಬರಬೇಕಾಗಿದೆ.