Home ರಾಜಕೀಯ ಸಮಾಚಾರ ಗುರುವಾಯನಕೆರೆ; ಕಾಂಗ್ರೆಸ್ ಸಮಾವೇಶದ ಬ್ಯಾನರ್ ಹರಿದ ಕಿಡಿಗೇಡಿಗಳು

ಗುರುವಾಯನಕೆರೆ; ಕಾಂಗ್ರೆಸ್ ಸಮಾವೇಶದ ಬ್ಯಾನರ್ ಹರಿದ ಕಿಡಿಗೇಡಿಗಳು

60
0

ಬೆಳ್ತಂಗಡಿ; ಗುರುವಾಯನಕೆರೆಯ ಶಕ್ತಿನಗರದಲ್ಲಿ ಭಾನುವಾರ ನಡೆಯಲಿರುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಎಂಬ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಹತ್ತಾರು ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದ ಘಟನೆ ಶನಿವಾರ ರಾತ್ರಿಯ ವೇಳೆ ಸಂಭವಿಸಿದೆ.

ಸಮಾವೇಶದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಸಚಿವರಾದ ಚೆಲುವರಾಯ ಸ್ವಾಮಿ , ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಮಟ್ಟದ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ತಾಲುಕಿನಾದ್ಯಂತ ವ್ಯಾಪಕ ಪ್ರಮಾಣದ ಪ್ರಚಾರ ಬ್ಯಾನರ್ , ಪಕ್ಷದ ಧ್ವಜಗಳು ಸೇರಿದಂತೆ ಬಂಟಿಂಕ್ಸ್ ಗಳನ್ನು ಅಳವಡಿಸಲಾಗಿತ್ತು.
ಶನಿವಾರ ರಾತ್ರಿ ಗುರುವಾಯನಕೆರೆ ಎಂಬಲ್ಲಿ ಅಳವಡಿಸಲಾಗಿದ್ದ ಹತ್ತಾರು ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವುದು ಕಂಡು ಬಂದಿದೆ.
ಗುರುವಾಯನಕೆರೆ ಪರಿಸರದಲ್ಲಿ ಬ್ಯಾನರ್ ಗಳನ್ನು ಹರಿದು ಹಾಕಲಾಗಿದೆ.

LEAVE A REPLY

Please enter your comment!
Please enter your name here