Home ಸ್ಥಳೀಯ ಸಮಾಚಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ  ಭಯೋತ್ಪಾದಕ ದಾಳಿ ಖಂಡನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ  ಭಯೋತ್ಪಾದಕ ದಾಳಿ ಖಂಡನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ

21
0

ಬೆಳ್ತಂಗಡಿ;  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನುಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪರಮ ಪೂಜ್ಯ ಲಾರೆನ್ಸ್ ಮುಕ್ಕಿಯಿ ಅವರು  ತೀವ್ರವಾಗಿ ಖಂಡಿಸಿದಾರೆ.
“ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಅಮಾನುಷಕ ಕೃತ್ಯವಾಗಿದೆ ಮತ್ತು ನಾನು ಅದನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ದಾಳಿಯಲ್ಲಿ ಕರ್ನಾಟಕದವರು ಪೀಡಿತರಾಗಿದೆ ಎಂಬುದು ನನ್ನ ದುಃಖವನ್ನು ಇಮ್ಮಡಿಗೊಳಿಸಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಈ ಅರ್ಥಹೀನ ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡ ಕರ್ನಾಟಕದ ಮಂಜುನಾಥ್ ಅವರ ಕುಟುಂಬದೊಂದಿಗೆ ನನ್ನ ಪ್ರಾರ್ಥನೆಗಳು ಇವೆ. ಇಂತಹ ವಿಭಜನಕಾರಿ ಕಾರ್ಯಸೂಚಿಗಳನ್ನು ಸೋಲಿಸಬೇಕು ಮತ್ತು ನಮ್ಮ ರಾಷ್ಟ್ರದಲ್ಲಿ ಶಾಂತಿ ನೆಲೆಸಬೇಕು. ಸಾಮರಸ್ಯ ಮತ್ತು ಶಾಂತಿಯುತ ಸಮಾಜಕ್ಕಾಗಿ ನಾವು ಒಗ್ಗೂಡಿ ಒಟ್ಟಾಗಿ ಕೆಲಸ ಮಾಡೋಣ.” ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಲಾರೆನ್ಸ್ ಮುಕ್ಕುಯಿ ಅವರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here