Home ಸ್ಥಳೀಯ ಸಮಾಚಾರ ವಿಜಯರಾಘವ ಪಡ್ವೆಟ್ನಾಯ ಸ್ಮಾರಕ ಗೋಪುರ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 15 ಲಕ್ಷ ರೂ. ನೆರವು

ವಿಜಯರಾಘವ ಪಡ್ವೆಟ್ನಾಯ ಸ್ಮಾರಕ ಗೋಪುರ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 15 ಲಕ್ಷ ರೂ. ನೆರವು

19
0

ಬೆಳ್ತಂಗಡಿ;  ಧರ್ಮಸ್ಥಳದಲ್ಲಿ ಹೆಗ್ಗಡೆಯವರ ಸಹೋದರ ಡಿ. ಹರ್ಷೇಂದ್ರ ಕುಮಾರ್ ರೂ. ೧೫ ಲಕ್ಷದ ಡಿ.ಡಿ. ಯನ್ನು ಹಸ್ತಾಂತರಿಸಿದರು.
ಉಜಿರೆ: ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಎದುರು ನಿರ್ಮಾಣಗೊಳ್ಳುತ್ತಿರುವ ಕೀರ್ತಿಶೇಷ ವಿಜಯರಾಘವ ಸ್ಮಾರಕ ಗೋಪುರ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಸಾದರೂಪವಾಗಿ ಮಂಜೂರು ಮಾಡಿದ ೧೫ ಲಕ್ಷ ರೂ. ನ ಡಿ.ಡಿ. ಯನ್ನು ಡಿ. ಹರ್ಷೇಂದ್ರ ಕುಮಾರ್ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.
ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮೋಹನ ಕುಮಾರ್, ರವಿ ಚಕ್ಕಿತ್ತಾಯ, ರಾಘವೇಂದ್ರ ಬೈಪಾಡಿತ್ತಾಯ, ರವೀಂದ್ರ ಶೆಟ್ಟಿ, ಮಂಜುನಾಥ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here