
ಬೆಳ್ತಂಗಡಿ; ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ಕತ್ತರಿಗುಡ್ಡೆ ಎಂಬಲ್ಲಿ ಭಾರಿ ಗಾಳಿ ಮಳೆಗೆ ಮನೆಯೊಂದರ ಮೇಲ್ಛಾವಣಿಯ ಶೀಟ್ ಗಳಿಗೆ ಸಂಪೂರತಣ ಹಾನಿಯಾದ ಘಟನೆ ಸಂಭವಿಸಿದೆ.
ಇಲ್ಲಿನ ನಿವಾಸಿ ಹಮಾಜ್ ಎಂಬವರ ಮನೆಗೆ ಹಾನಿ ಸಂಭವಿಸಿದೆ.
ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಇವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕಾಂಗ್ರೆಸ್ ಮುಖಂಡರುಗಳಾದ ಇಲಿಯಾಸ್, ಇಮ್ರಾನ್, ನಿಫಾಲ್, ರಮೇಶ್, ರಹೀಂ ಹಾಗೂ ಇತರರು ಕೂಡಲೇ ಸ್ಥಳಕ್ಕೆ ಆಗಮಿಸಿ ಸಂತ್ರಸ್ತ ಕುಟುಂಬಕ್ಕೆ ಸಹಕಾರ ನೀಡಿದರು. ಗ್ರಾ.ಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಂಡುದ್ದಾರೆ.