Home ಅಪಘಾತ ಉಜಿರೆ; ಬೈಕ್ ಡಿಕ್ಕಿ ಪಾದಚಾರಿ ಸಾವು

ಉಜಿರೆ; ಬೈಕ್ ಡಿಕ್ಕಿ ಪಾದಚಾರಿ ಸಾವು

18
0

ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಹೊಡೆದು ಗಂಭೀರವಾಗಿ ಗಾಯಗೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ನಾರಾಯಣ ಪೂಜಾರಿ (65) ಎಂಬವರಾಗಿದ್ದಾರೆ.
ಎ 29 ರಂದು ಮದ್ಯಾಹ್ನ ನಾರಾಯಣ ಪೂಜಾರಿ ಅವರು ಉಜಿರೆ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ನಾರಾಯಣ ಪೂಜಾರಿ ಅವರ ತಲೆಗೆ ಗಂಭೀರ ಗಾಯವಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಎ 29 ರಂದಯ ಸಂಜೆಯ ವೇಳೆ ಅವರು ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಉಮೇಶ್ ನಾಯ್ಕ ಎಂಬಾತ ಚಲಾಯಿಸುತ್ತಿದ್ದ ಬೈಕ್ ಅಪಘಾತಕ್ಕೆ ಕಾರಣವಾಗಿದ್ದು ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here