



ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಹತ್ತನೇ ತರಗತಿಯ ವಿಧ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಈಡಾಗಿ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ಬಾಲಕ ಸ್ಥಳೀಯ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ (16ವ) ಎಂಬಾತನಾಗಿದ್ದಾನೆ.
ಮೇ 4 ಭಾನುವಾರದು ಮಧ್ಯಾಹ್ನದ ವೇಳೆ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಬಾಲಕನ್ನು ಆಸ್ಪತ್ರೆಗೆ ಕೊಂಡೊಯ್ದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
