




ಬೆಳ್ತಂಗಡಿ; ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.
ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ ದಿಟ್ಟ ಕ್ರಮ ಮುನ್ನುಡಿಯಾಗಲಿದೆ. ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ ವಾಗಿದೆ
ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕ್ರಮಗಳನ್ನೂ ನಾವು ಬೆಂಬಲಿಸುತ್ತೇವೆ. ಎಂದು ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ