Home ಅಪರಾಧ ಲೋಕ ಬಂಟ್ವಾಳ; ತಲವಾರಿನಿಂದ ಕಡಿದು ಯುಕನ ಕೊಲೆ

ಬಂಟ್ವಾಳ; ತಲವಾರಿನಿಂದ ಕಡಿದು ಯುಕನ ಕೊಲೆ

0

ಬಂಟ್ವಾಳ: ದುಷ್ಕರ್ಮಿಗಳ ತಂಡವೊಂದು ಇಬ್ಬರು ಯುವಕರ ಮೇಲೆ ತಲವಾರು ದಾಳಿ ಮಾಡಿದ ಪರಿಣಾಮ ಓರ್ವ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ಮಂಗಳವಾರ ಸಂಭವಿಸಿದೆ.

ಘಟನೆಯಲ್ಲಿ ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಅಬ್ದುಲ್ ರಹಿಮಾನ್ ಮೃತಪಟ್ಟಿದ್ದಾರೆ. ಮತ್ತೋರ್ವ ಯುವಕ ಇಮ್ಮಿಯಾಝ್ ಗಾಯಗೊಂಡಿದ್ದಾರೆ.

ಇಬ್ಬರೂ ಕೊಲ್ತಮಜಲು ಎಂಬಲ್ಲಿ ಪಿಕ್ ಅಪ್ ವಾಹನದಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ತಲವಾರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version