Home ಅಪರಾಧ ಲೋಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ; 15ಮಂದಿ ಆರೋಪಿಗಳ ವಿರುದ್ದ ಪ್ರಕರಣ ದಾಖಲು

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ; 15ಮಂದಿ ಆರೋಪಿಗಳ ವಿರುದ್ದ ಪ್ರಕರಣ ದಾಖಲು

19
0

ಮಂಗಳೂರು: ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಅವರ ಪುತ್ರ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರಾದ ದೀಪಕ್ ಮತ್ತು ಸುಮಿತ್ ಸೇರಿದಂತೆ 15ಮಂದಿ ಆರೋಪಿಗಳ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇವರು ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿಗೆ ಪರಿಚಯಸ್ಥರೇ ಆಗಿದ್ದರು ಎಂದು ತಿಳಿದು ಬಂದಿದೆ.

ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಹೊಳೆ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಅನ್ ಲೋಡ್ ಮಾಡುವ ವೇಳೆ ದೀಪಕ್ ಹಾಗೂ ಸುಮಿತ್ ಮತ್ತು ಇತರ 15 ಮಂದಿ ಅಬ್ದುಲ್ ರಹಿಮಾನ್ ಅವರನ್ನು ಪಿಕಪ್ ವಾಹನದಿಂದ ಎಳೆದು ಹಾಕಿ ತಲವಾರು, ಚೂರಿ, ರಾಡ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಡೆಯಲು ಹೋದಾಗ ತನ್ನ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ಘಟನೆಯಲ್ಲಿ ಗಾಯಗೊಂಡಿರುವ ಕಲಂದರ್ ಶಾಫಿ ಮಾಹಿತಿ ನೀಡಿದ್ದಾರೆ ಎಂದು ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ಮಹಮ್ಮದ್ ನಿಸಾರ್ ಎಂಬವರು ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸದ್ಯ ತಲೆ ಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಡಿವೈಎಸ್ ಪಿ ವಿಜಯಪ್ರಕಾಶ್ ನೇತೃತ್ವದಲ್ಲಿ ಪೊಲೀಸರ 5 ತಂಡ ರಚಿಸಲಾಗಿದೆ. ಮಂಗಳೂರು ಸಿಸಿಬಿ ತಂಡ ಮತ್ತು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here