
ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿರುವ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಬದಲಿಸು ನಿಟ್ಟಿನಲ್ಲಿ ರಾಜ್ಯ ಸರಕಾರ ಕೊನೆಗೂ ಮುಂದಾಗಿದ್ದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಇದೀಗ ಮಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ತನ್ನ ಸೆವಾ ಬದ್ದತೆಯಿಂದ ಹೆಸರು ಪಡೆದಿರುವ ಉಡುಪಿಯ ಎಸ್ಪಿಯಾಗಿದ್ದ ಡಾ.ಅರುಣ್ ಕೆ ಅವರನ್ನು ನೇಮಕ ಮಾಡಲಾಗಿದೆ.
ಹೊಸ ಅಧಿಕಾರಿಗಳ ನೇಮಕದಿಂದ ಜಿಲ್ಲೆಯ ಶಾಂತಿ ವ್ಯವಸ್ಥೆ ಕಾಪಾಡುವಲ್ಲಿ ಯಾವ ಹೊಸ ಬದಲಾವಣೆಗಳಾಗಲಿದೆ ಎಂದು ಕಾದು ನೋಡಬೇಕಾಗಿದೆ.