
ಬೆಳ್ತಂಗಡಿ : ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೇ.30 ರಂದು ಮೃತಪಟ್ಟಿದ್ದಾನೆ.
ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಕಿನ್ನಿಬೆಟ್ಟು, ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ನಿವಾಸಿ ಗೋಪಾಲ ಗೌಡ ಮತ್ತು ಸುಪ್ರಭಾ ದಂಪತಿಗಳ ಮಗ ಹಿತೇಶ್ (17) ಡೆಂಗ್ಯೂ ಜ್ವರದಿಂದ ಪ್ಲೇಟ್ಲೆಟ್ ಸಂಖ್ಯೆ ಕಡಿಮೆಯಾಗಿ ಚಿಕಿತ್ಸೆ ಫಲಿಸದೆ ಮೇ.30 ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಲಕನಾಗಿದ್ದಾನೆ.