


ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಮಂಗಳೂರು ಬ್ಯಾರಿ ವಾರಿಯರ್ 03 ಎಂಬ ಇನ್ ಸ್ಟ್ರಾಗ್ರಾಮ್ ಖಾತೆಯಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಭಾವಚಿತ್ರವನ್ನು ಹೊಂದಿರುವ ಪೋಸ್ಟ್ ಹಾಕಿ ಅದರೊಂದಿಗೆ ವಿವಿಧ ಸಮುದಾಯಗಳ ನಡುವೆ ವೈಮನಸ್ಯವುಂಟುಮಾಡುವ ಹಾಗೂ ಈ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ಯುಂಟುಮಾಡುವ ಸಾಧ್ಯತೆಗಳಿರುವ ಸಂದೇಶವನ್ನು ಬರೆದಿದ್ದು ಈ ಹಿನ್ನಲೆಯಲ್ಲಿ ಆರೋಪಿಯ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 55, 103, 353(2) ರಂತೆ ಪ್ರಕರಣವನ್ನು ದಾಖಲಿಸಲಾಗಿದ್ದು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
