
ಬೆಳ್ತಂಗಡಿ; ಕೊಯ್ಯೂರಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ದೇಲೋಡಿ ಮನೆ ನಿವಾಸಿ ಕಿಶನ್ ಕುಮಾರ್ ಎಂಬಾತನಾಗಿದ್ದಾನೆ.
ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಈತನ ಮೃತದೇಹ ಜೂನ್ 12ರಂದು ಪತ್ತೆಯಾಗಿದೆ.
ಈತ ವಿಪರೀತ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು ಕುಡಿತದ ಚಟವನ್ನೂ ಹೊಂದಿದ್ದ ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದ್ದು ಈ ಬಗ್ಗೆ ಸಹೋದರ ಧನಂಜಯ ನೀಡಿರುವ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ