

ಬೆಳ್ತಂಗಡಿ : ಮನೆಯ ಕಪಾಟಿನಲ್ಲಿಟ್ಟಿದ
ಚಿನ್ನಾಭರಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಘಟನೆ ಜೂ.14 ರಂದು ಬೆಳ್ತಂಗಡಿಯ ರೆಖ್ಯಾದಲ್ಲಿ ಬೆಳಕಿಗೆ ಬಂದಿದೆ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಸಬ್ ಇನ್ಸೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ತಂಡ,ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದು.ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಚಿನ್ನ ಕಳೆದುಕೊಂಡಿರುವ ಕುಸುಮರವರು ತನ್ನ ಗಂಡ ಅಣ್ಣಿ @ ಆನಂದ ಗೌಡ ಬೆಳ್ತಂಗಡಿ ತಾಲೂಕು ರೆಖ್ಯಾ ಗ್ರಾಮದ ಕಟ್ಟೆ ಎಂಬಲ್ಲಿ ವಾಸವಿದ್ದು ಇಬ್ಬರು ದಿನಾ ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭ ಮನೆಗೆ ಬೀಗ ಹಾಕಿ ಬೀಗದ ಕೀಯನ್ನು ಕೊಟ್ಟಿಗೆಯಲ್ಲಿ ಬಚ್ಚಿಟ್ಟು ಕೆಲಸಕ್ಕೆ ಹೋಗಿ ಸಂಜೆ ವಾಪಾಸು ಮನೆಗೆ ಬರುತ್ತಿದ್ದರು.
ಕುಸುಮ ಬಳಿ ಸುಮಾರು 3 ಪವನ್ ತೂಕದ ಕರಿಮಣಿ ಸರ. ಸುಮಾರು 1 ಪವನ್ ತೂಕದ ಬಳೆ, ಸುಮಾರು 2 ಪವನ್ ತೂಕದ ಚಿನ್ನದ ಚೈನ್, ಸುಮಾರು ಅರ್ಧ ಪವನ್ ತೂಕದ ಒಂದು ಜೊತೆ ಕಿವಿಯೋಳೆ ಒಟ್ಟು ರೂ 2,60,000 ರೂಪಾಯಿ ಅಂದಾಜು ಮೌಲ್ಯದ 52 ಗ್ರಾಂ ಚಿನ್ನಾಭರಣವಿತ್ತು.ಚಿನ್ನಾಭರಣವನ್ನು ಮೇ.23 ರಂದು ಕೊನೆಯದಾಗಿ ನೋಡಿರುತ್ತಾರೆ. ಕುಸುಮ ಹಾಗೂ ಗಂಡ ಆನಂದ ಗೌಡ ಶಿರಾಡಿ ದೇವಸ್ಥಾನಕ್ಕೆ ಹೋಗುವುದಕ್ಕಾಗಿ ಜೂನ್ 14ರಂದು ಕಪಾಟಿ ನಲ್ಲಿಟ್ಟ ಚಿನ್ನಾಭರಣವನ್ನು ತೆಗೆಯಲು ಹೋದಾಗ ಕಪಾಟಿಗೆ ಹಾಕಿದ್ದ ಕೀ ಹಾಕಿದ ಸ್ಥಿತಿಯಲ್ಲಿ ಇತ್ತು. ಅದರೊಳಗೆ ಇಟ್ಟಿದ್ದ ಚಿನ್ನಾಭರಣ ಯಾರೋ ಕಳ್ಳರು ಕಳವು ಮಾಡಿರುವುದು ಕಂಡು ಬಂದಿದೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.15 ರಂದು ಕುಸುಮ ದೂರು ನೀಡಿದ್ದಾರೆ.
ಅದರಂತೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
