
ಬೆಳ್ತಂಗಡಿ; ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಸುಲ್ಕೇರಿ ಗ್ರಾಮದ ಮುಳ್ಳಗುಡ್ಡೆ ನಿವಾಸಿ ಯಮುನಾ ಅಣ್ಣು ಪೂಜಾರಿಯವರ ಮನೆಯ ಮೇಲ್ಭಾವಣಿಗೆ ಹಾನಿಯಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸಂತ್ರಸ್ತರಿಗೆ ವೈಯಕ್ತಿಕ ಸಹಾಯ ನೀಡಿದರು,ಸರಕಾರದಿಂದ ಶೀಘ್ರ ಪರಿಹಾರ ಒದಗಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು