ಬೆಳ್ತಂಗಡಿ : ಅಕ್ರಮವಾಗಿ ಮಧ್ಯ ಸಂಗ್ರಹಿಸಿ ಮನೆಯ ತೋಟದಲ್ಲಿ ಶೇಖರಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ವಿ ಮದ್ಯವಶಪಡಿಸಿಕೊಂಡು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬೆಳ್ಳನಾರು ನಿವಾಸಿ ಪುರುಷೋತ್ತಮ ಎಂಬಾತನ ಮನೆಯ ತೋಟದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಮದ್ಯ ಸಂಗ್ರಹಿಸಿಟ್ಟ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಜೂ.16 ರಂದು ಸಂಜೆ 6 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ಸಿಬ್ಬಂದಿ ಪುರುಷೋತ್ತಮ ಎಂಬಾತನ ಮನೆಗೆ ತೋಟದ ಮೇಲೆ ದಾಳಿ ಮಾಡಿ 4.860 ಲೀಟರ್ 54 ಸ್ಯಾಚೆಟ್ 90 ಎಂ.ಎಲ್ ಮೈಸೂರು ಲ್ಯಾನ್ಸರ್ ವಿಸ್ಕಿ ಮದ್ಯ ವಶಪಡಿಸಿಕೊಂಡಿದ್ದಾರೆಇದರ ಅಂದಾಜು ಮೌಲ್ಯ 2,700 ರೂಪಾಯಿ ಅಗಿದ್ದು. ಈ ಮದ್ಯ ಮರಾಟಕ್ಕೆ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವುದರಿಂದ ಧರ್ಮಸ್ಥಳ ಪೊಲೀಸ್ ಠಾ ಆರೋಪಿ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮಸ ಪುರುಷೋತ್ತಮ ಎಂಬಾತನ ವಿರುದ್ದ ಅಬಕಾರಿ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
