Home ಸ್ಥಳೀಯ ಸಮಾಚಾರ ಬದ್ಯಾರ್ ರಿಕ್ಷಾ ಅಪಘಾತ ವ್ಯಕ್ತಿ ಸಾವು

ಬದ್ಯಾರ್ ರಿಕ್ಷಾ ಅಪಘಾತ ವ್ಯಕ್ತಿ ಸಾವು

29
0

ಬೆಳ್ತಂಗಡಿ; ಬದ್ಯಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡು ರಿಕ್ಷಾ ಚಾಲಕ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.
ಮೃತ ವ್ಯಕ್ತಿ ಮಾಲಾಡಿ ನಿವಾಸಿ ಶಿವಾನಂದ ಪಿ ಮಾಳವ (33) ಎಂಬವರಾಗಿದ್ದಾರೆ.
ಗುರುವಾಯನಕೆರೆಯಿಂದ ಅಳದಂಗಡಿ ಗೆ ಪ್ರಯಾಣಿಸುತ್ತಿದ್ದ ವೇಳೆ ಆಟೋ ರಿಕ್ಷಾ  ಅಪಘಾತ ಸಂಭವಿಸಿದೆ. ಕೂಡಲೇ ಗಂಭೀರವಾಗಿ ಗಾಯಗೊಂಡ ಇವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಆತ ಮೃತ ಪಟ್ಟಿದ್ದ ಎನ್ನಲಾಗಿದೆ. ಆಟೋದಲ್ಲಿದ್ದ ಇನ್ನೊಬ್ಬರು ಗಾಯಗೊಂಡಿದ್ದು ಆವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here