

ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು ಗುರುವಾರ ಮಧ್ಯಾಹ್ನ ಲಾಯಿಲ ಗ್ರಾಮದಲ್ಲಿ ಭಾರೀ ಗಾಳಿ ಬೀಸಿದೆ. ಲಾಯಿಲ ಗ್ರಾಮದ ಅಂಕಾಜೆ ನಿನ್ನಿಕಲ್ಲು ಎಂಬಲ್ಲಿಯ ಜೋಕಿಂ ಸಿಕ್ವೆರರವರ ಮಾಲಕತ್ವದ ಎರಡು ಬಾಡಿಗೆ ಮನೆಯ ಛಾವಣಿ ಇಂದು ಮಧ್ಯಾಹ್ನ ಗಾಳಿಗೆ ಸಂಪೂರ್ಣವಾಗಿ
ಹಾನಿಗೀಡಾಗಿದೆ. ಈ ಕಟ್ಟಡದಲ್ಲಿ ಬಾಡಿಗೆದಾರರು ವಾಸವಾಗಿದ್ದರು. ಗಾಳಿಯಿಂದಾಗಿ ಮೇಲ್ಛಾವಣಿ ಹಾರಿ ಹೀಗಿದ್ದು ಇಲ್ಲಿ ವಾಸಿಸುತ್ತಿದ್ದ ಬಾಡಿಗೆದಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಯಾವುದೇ ಜೀವ ಹಾನಿಯಾಗಿರುವುದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ರಿಯವರನ್ನು ಸಂಬಂಧಿಕರ ಮನೆಗಳಿಗೆ ಹೋಗಲು ಸೂಚನೆ ನೀಡಲಾಗಿದೆ.
