Home ಸ್ಥಳೀಯ ಸಮಾಚಾರ ಬೆಳ್ತಂಗಡಿ; ಹೃದಯಾಘಾತ ತಾಲೂಕು ಕಚೇರಿಯ ಪ್ರಥಮದರ್ಜೆ ಸಹಾಯಕ ಕುಸಿದು ಬಿದ್ದು ಸಾವು

ಬೆಳ್ತಂಗಡಿ; ಹೃದಯಾಘಾತ ತಾಲೂಕು ಕಚೇರಿಯ ಪ್ರಥಮದರ್ಜೆ ಸಹಾಯಕ ಕುಸಿದು ಬಿದ್ದು ಸಾವು

0

ಬೆಳ್ತಂಗಡಿ : ಹೃದಯಾಘಾತದಿಂದ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕ ಮೂಲತಹ ಹಾಸನ ಜಿಲ್ಲೆಯವರಾದ ಸತೀಶ್(46) ಜುಲೈ 15 ರಂದು ಬೆಳಗ್ಗೆ ಸ್ನಾನ ಮಾಡಿ ವಾಪಸ್ ಬರುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಎಂದಿನಂತೆ ಬೆಳಗ್ಗೆ ಸ್ನಾನ ಮಾಡಿ ವಾಪಸ್ ಬರುವಾಗ ಕುಸಿದು ಬಿದ್ದ ಸತೀಶ್‌ ಅವರನ್ನು ಪತ್ನಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ.

ಸತೀಶ್ ಮೂಲತಃ ಹಾಸನ ಜಿಲ್ಲೆಯವರು ಲಾಯಿಲದಲ್ಲಿ ಬಾಡಿಗೆ ಮನೆ ಮಾಡಿದ್ದರು. ಪತ್ನಿ ಓರ್ವ ಮಗನನ್ನು ಅಗಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version