

ಬೆಳ್ತಂಗಡಿ: ಅರಸಿನಮಕ್ಕಿ ಸಮೀಪದ ಉಡ್ಯೆರೆ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಪದ್ಮಯ್ಯ ಗೌಡ ಎಂಬವರ ತೋಟದಲ್ಲಿ ಗೊಬ್ಬರ ಹಾಕುತ್ತಿದ್ದ ರೆಖ್ಯ ಬೂಡು ನಿವಾಸಿ ಬಾಲಕೃಷ್ಣ ಎಂಬವರು ಗಾಯಗೊಂಡವರಾಗಿದ್ದಾರೆ. ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಕಾಡು ಹಂದಿಯ ಇವರು ತೋಟದ್ದಲ್ಲಿದ್ದ ವೇಳೆ ಹಠಾತ್ ದಾಳಿಗೆ ಸಿಲುಕಿದ್ದು, ಅವರ ಸೊಂಟ, ಕೈ ಮತ್ತು ಕಾಲಿನ ಭಾಗಗಳಲ್ಲಿ ಗಂಭೀರ ಗಾಯಗಳಾಗಿವೆ.
ಅವರನ್ನು ಸ್ಥಳೀಯರು ತಕ್ಷಣವೇ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
