ಬೆಳ್ತಂಗಡಿ; ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಭಾನುವಾರ ಪತ್ತೆಯಾಗಿದೆ.
ಮೃತ ವ್ಯಕ್ತಿಯ ಗುರುತನ್ನು ಪೊಲೀಸರು ಪತ್ತೆಹಚ್ಚಿದ್ದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿವಾಸಿ ಎಂದು ಗುರುತಿಲಾಗಿರುವುದಾಗಿ ತಿಳಿದು ಬಂದಿದೆ
ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ
ನೇತ್ರಾವತಿ ನದಿಯ ನೀರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಇರುವುದಾಗಿ ಸ್ಥಳೀಯ ವ್ಯಕ್ತಿ ಬಿ ಪ್ರಮೋದ್ ಎಂಬವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಸುಮಾರು ೩೦ರಿಂದ ೩೫ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಕಂಡು ಬಂದಿದ್ದು ಪೊಲೀಸರು ಮೃತದೇಹವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ವ್ಯಕ್ತಿ ಆಕಸ್ಮಿಕವಾಗಿ ನದಿನೀರಿಗೆ ಬಿದ್ದು ಸಾವನ್ನು ಅಪ್ಪಿರಬಹುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನಿಸಿ ಧರ್ಮಸ್ಥಳ ಠಾಣೆಯಲ್ಲಿ 194 BNS 2023ರಂತೆ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ನಡೆದ ಪರಿಶೀಲನೆಯಲ್ಲಿ ಮೃತದೇಹದ ಗುರುತು ಪತ್ತೆಯಾಗಿದೆ.
