


ಬೆಳ್ತಂಗಡಿ; ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದನವನ್ನು ಸಾಗಾಟ ಮಾಡುತ್ತಿದ್ದ ವಾಹನದಲ್ಲಿ ಇದ್ದ ಒಬ್ಬನಿಗೆ ಸ್ಥಳದಲ್ಲಿದ್ದವರು ಹಲ್ಲೆ ನಡೆಸಿರುವುದಾಗಿಯೂ ತಿಳಿದು ಬಂದಿದೆ.
ಚಾರ್ಮಾಡಿ ಕಡೆಯಿಂದ ಅತಿಯಾದ ವೇಗದಲ್ಲಿ ಬಂದ ಇನ್ನೋವಾ ಕಾರು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದ್ದು ಗುರುವಾಯಕೆರೆಯಲ್ಲಿ ವಾಹನವನ್ನು ತಡೆದಿದ್ದಾರೆ. ಟ್ರಾಫಿಕ್ ಪೊಲೀಸರು ಇದ್ದು ವಾಹನವನ್ನು ತಡೆಯಲಾಗಿದೆ ಈ ವೇಳೆ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಸಿಕ್ಕಿಬಿದ್ದವನ ಮೇಲೆ ಹಲ್ಲೆ ಮಾಡಲಾಗಿದೆ.
ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಾಟ ಮಾಡಲಾಗುತ್ತಿತ್ತು. ಕಾರಿಗೆ ನಕಲಿ ನಂಬರ್ ಪ್ಲೇಟ್ ಅಂಟಿಸಿರುವುದು ಕಂಡುಬಂದಿದೆ. ಘಾನೆಯ ವೇಳೆ ಸ್ಥಳದಲ್ಲಿ ನೂರಾರು ಜನರು ಜಮಾವಣೆಯಾಗಿದ್ದರು
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗದ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

