


ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣದ ಬೆನ್ನಲ್ಲಿಯೇ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ತಾಯಿ ಸುಜಾತಾ ಭಟ್ ಧರ್ಮಸ್ಥಳ ಠಾಣೆಗೆ ನೀಡಿದ್ದ ದೂರನ್ನು ಇದೀಗ ಎಸ್.ಐ.ಟಿ ಠಾಣೆಗೆ ಹಸ್ತಾಂತರಿಸಿರು ವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾಹೇಳಿಕೆಯಲ್ಲಿ ಮಾಹಿತಿ ನೀಡಿದ ಧರ್ಮಸ್ಥಳಠಾಣೆಗೆ ಬಂದಿದ್ದ ಜುಲೈ 15ರಂದು ಅನನ್ಯ ಭಟ್ ನಾಪತ್ತೆಯಾಗಿರುವ ಬಗ್ಗೆ ಆಕೆಯ ತಾಯಿ ಸುಜಾತಾ ಭಟ್ ದೂರು ನೀಡಿದ್ದರು. ಧರ್ಮಸ್ಥಳ ಪೊಲೀಸರು ನಂ. 175/PTN/DPS/2025 ರಂತೆ ದೂರರ್ಜಿಯನ್ನು ಸ್ವೀಕರಿಸಿದ್ದರು. ಈ ದೂರರ್ಜಿಯನ್ನು ಡಿಜಿ ಹಾಗೂ ಐಜಿಪಿಯವರು ಆ19 ರಂದು ನೀಡಿದ ಆದೇಶದಂತೆ ಮುಂದಿನ ವಿಚಾರಣೆಗಾಗಿ ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗಿರುವುದಾಗಿ ತಿಳಿಸಿದ್ದಾರೆ
