Home ಸ್ಥಳೀಯ ಸಮಾಚಾರ ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ

ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ

0

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವಿಲ್ ಮಾಡಿದ್ದು, ಕಾಲ್ಪನಿಕ ಮಾಹಿತಿಗಳನ್ನು ಮಾಡಿಟ್ಟು ದೂತ ಎಂಬ ಯೂಟ್ಯೂಬ್ ನಲ್ಲಿ ಸಮೀರ್ ಎಮ್.ಡಿ ವಿಡಿಯೋ ಪ್ರಸಾರ ಮಾಡಿದ ಬಗ್ಗೆ ಜು.12 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸರು ಮೂರು ಭಾರಿ ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದೆ ಇರುವ ಕಾರಣ ಆ.21 ರಂದು ಧರ್ಮಸ್ಥಳ ಪೊಲೀಸರು ಬೆಂಗಳೂರು ಬಾಡಿಗೆ ಮನೆಯಿಂದ ಬಂಧಿಸಲು ಹೋಗಿದ್ದು ಈ ವೇಳೆಗೆ ಸಂಜೆ ಮಂಗಳೂರು ಕೋರ್ಟ್ ನಿಂದ ಆ.21 ರಂದು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾನೆ.

ಇನ್ನೂ ಪೊಲೀಸರು ವಿಚಾರಣೆಗೆ ಹಾಜರಾಗಬೇಕು, ಸಾಕ್ಷಿ ನಾಶ ಮಾಡಬಾರದೆಂದು ಕೋರ್ಟ್ ಷರತ್ತು ವಿಧಿಸಿದ್ದು ಅದರಂತೆ ಧರ್ಮಸ್ಥಳ ಪೊಲೀಸರ ವಿಚಾರಣೆ ಬಾಕಿ ಇರುವ ಕಾರಣದಿಂದ ಆ.22 ರಂದು ಮತ್ತೆ
ಸಮೀರ್.ಎಮ್.ಡಿ ಗೆ ವಿಚಾರಣೆಗೆ ಆ.23 ರಂದು 10 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸಲು ನೋಟಿಸ್ ಜಾರಿ ಮಾಡಿದ್ದಾರೆ. ಇನ್ನೂ ದೂತ ಸಮೀರ್.ಎಮ್.ಡಿ ವಿಚಾರಣೆಗೆ ಹಾಜರಾಗುತ್ತಾ ಎಂದು ಕಾದು ನೋಡಬೇಕು.

NO COMMENTS

LEAVE A REPLY

Please enter your comment!
Please enter your name here

Exit mobile version