Home ಅಪರಾಧ ಲೋಕ ಬೆಳ್ತಂಗಡಿ; ಎಸ್.ಐ.ಟಿ ಕಾರ್ಯಾಚರಣೆ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ ನ್ಯಾಯವಾದಿ ಮಂಜುನಾಥ್ ಎನ್ ವಿರುದ್ದ ಪ್ರಕರಣ...

ಬೆಳ್ತಂಗಡಿ; ಎಸ್.ಐ.ಟಿ ಕಾರ್ಯಾಚರಣೆ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ ನ್ಯಾಯವಾದಿ ಮಂಜುನಾಥ್ ಎನ್ ವಿರುದ್ದ ಪ್ರಕರಣ ದಾಖಲು

13
0

ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ನಡೆಯುತ್ತಿರುವ ಎಸ್‌.ಐ.ಟಿ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಭಯವುಂಟು ಮಾಡುವಂತಹ ಅನಧಿಕೃತ ಮಾಹಿತಿಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಪ್ರಸಾರ ಮಾಡಿರುವ ಬಗ್ಗೆ ನ್ಯಾಯವಾದಿ ಮಂಜು‌ನಾಥ್ ಎನ್, ಅವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ ಎಂಬವರು ಈ ಬಗ್ಗೆ ದೂರು ನೀಡಿದ್ದು ಪ್ರಸ್ತುತ ಎಸ್.ಐ‌ಟಿ ತಂಡದಿಂದ ನಡೆಯುತ್ತಿರುವ ಕಾರ್ಯಾಚರಣೆ ಬಗ್ಗೆ ಸುಳ್ಳು ಪತ್ರಿಕಾ ಪ್ರಕಟಣೆಗಳನ್ನು ಬಿಡುಗಡೆ ಮಾಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ ಬಗ್ಗೆ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ 353(1)(b), 353(2)ಬಿಎನ್‌ಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here