Home ಅಪರಾಧ ಲೋಕ ಬೆಳ್ತಂಗಡಿ : ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸಿಕ್ಕ ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

ಬೆಳ್ತಂಗಡಿ : ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸಿಕ್ಕ ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

0

ಬೆಳ್ತಂಗಡಿ :

ಬೆಳ್ತಂಗಡಿ : ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸಿಕ್ಕ ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಏಳು ಅಸ್ಥಿಪಂಜರ ಪತ್ತೆಯಾದ ಪ್ರಕರಣದಲ್ಲಿ ಒಂದು ಅಸ್ಥಿಪಂಜರದ ಗುರುತನ್ನು ಐಡಿ ಕಾರ್ಡ್ ಮೂಲಕ ಪತ್ತೆ ಹಚ್ಚಿದ ಎಸ್.ಐ.ಟಿ ಅಧಿಕಾರಿಗಳು.

ಕೊಡುಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಟೊ.ಶೆಟ್ಟಿಗೇರಿ ಗ್ರಾಮದ ಯು.ಬಿ.ಅಯ್ಯಪ್ಪ (70) ಎಂಬವರ ಅಸ್ಥಿಪಂಜರ ಎಂದು ಎಸ್.ಐ.ಟಿ ದೃಢ ಪಡಿಸಿದೆ. ಅಸ್ಥಿಪಂಜರದ ಜೊತೆ ಇದ್ದ ಐಡಿ ಕಾರ್ಡ್
ಪತ್ತೆ ಹಚ್ಚಲಾಗಿದೆ.
ಐ ಡಿ ಕಾರ್ಡ್ ಸಮೀಪ ಪತ್ತೆಯಾದ ಮೃತದೇಹ ಅವರದ್ದೇ ಆಗಿರಬಹುದು ಎಂದು ಎಸ್.ಐ.ಟಿ ತಂಡ ಅನುಮಾನಿಸಿದ್ದು ಈ ಬಗ್ಗೆ ಪರಿಶೀಲನೆ ನಡೆಸಲಾರಂಭಿಸಿದೆ.

ಮೈಸೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋದ ಅಯ್ಯಪ್ಪ ನಾಪತ್ತೆಯಾದ ಬಗ್ಗೆ ಕಟ್ಟು ಪೊಲೀಸ್ ಠಾಣೆಯಲ್ಲಿ ಕುಟುಂಬ ಸದಸ್ಯರು ಪ್ರಕರಣ ದಾಖಲಿಸಿದ್ದರು ಆದರೆ ಅವರ ಬಗ್ಗೆ ಯಾವುದೇ ಸುಳಿವುಗಳು ಲಭಿಸಿರಲಿಲ್ಲ.
ಇದೀಗ ಬರೆ ತಲೆ ಬುರುಡೆ ಹಾಗು ಎಲುಬುಗಳು ಮಾತ್ರ ಪತ್ತೆಯಾಗಿದ್ದು ಈ ಹಿನ್ನಲೆಯಲ್ಲಿ ಇದು ಅವರದ್ದೇ ಮೃತದೇಹವೇ ಎಂದು ವಿಧಿವಿಜ್ಞಾನ ಪ್ರಯೊಗಾಲಯದಿಂದಲೇ ಪತ್ತೆಯಾಗಬೇಕಾಗಿದೆ

.

NO COMMENTS

LEAVE A REPLY

Please enter your comment!
Please enter your name here

Exit mobile version