Home ಸ್ಥಳೀಯ ಸಮಾಚಾರ ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಒಡಿಯೂರು ಸ್ವಾಮೀಜಿ;  ಧರ್ಮಸ್ಥಳದಲ್ಲಿ 27ನೆ ವರ್ಷದ ಭಜನಾ ತರಬೇತಿ ಕಮ್ಮಟ

ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಒಡಿಯೂರು ಸ್ವಾಮೀಜಿ;  ಧರ್ಮಸ್ಥಳದಲ್ಲಿ 27ನೆ ವರ್ಷದ ಭಜನಾ ತರಬೇತಿ ಕಮ್ಮಟ

0

ಬೆಳ್ತಂಗಡಿ: ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ 27 ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಭಜನೆ ಮತ್ತು ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದ್ದು ದೃಢಭಕ್ತಿಯಿಂದ ಭಜನೆ ಮಾಡಿದಾಗ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದರು.

ಭಜನೆಯಿಂದ ಸಾತ್ವಿಕ ಶಕ್ತಿ ಜಾಗೃತಗೊಂಡು ಭಯ, ದ್ವೇಷ ದೂರವಾಗಿ ಪ್ರೀತಿ-ವಿಶ್ವಾಸ ಮೂಡಿ ಬಂದು ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಸಂಸದ ಬ್ರಿಜೇಶ್ ಚೌಟ ಮಾತನಾಡಿ ಧರ್ಮ ಮತ್ತು ಸಂಸ್ಕೃತಿ ಉಳಿದರೆ ಮಾತ್ರ ದೇಶ ಉಳಿಯುತ್ತದೆ.
ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹನಾಯಕ್ ಶುಭಾಶಂಸನೆ ಮಾಡಿದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಮಹಿಳೆಯರು ಮತ್ತು ಮಕ್ಕಳು ಕೂಡಾ ಭಜನೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತೋಷವಾಗಿದೆ.
ಭಜನಾಪಟುಗಳು ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಕುಂದಾಪುರದ ಕೃಷ್ಣ ಪೂಜಾರಿ ಮತ್ತು ನೆಲ್ಯಾಡಿಯ ಕುಮಾರಿ ಭವಿಷ್ಯ ಕಮ್ಮಟದ ಬಗ್ಯೆ ಅನಿಸಿಕೆ ವ್ಯಕ್ತಪಡಿಸಿದರು.
ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು.
ಕಮ್ಮಟದ ಕಾರ್ಯದರ್ಶಿ ಎ.ವಿ. ಶೆಟ್ಟಿ ವರದಿ ಸಾದರಪಡಿಸಿದರು.
ಸುಬ್ರಹ್ಮಣ್ಯಪ್ರಸಾದ್ ಸ್ವಾಗತಿಸಿದರು. ಚಂದ್ರಶೇಖರ ಸಾಲ್ಯಾನ್ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಕಾರ್ಯಕ್ರಮ ನಿರ್ವಹಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version