
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಮತ್ತು ಪತ್ನಿಯ ಖಾತೆಗೆ ಹಣ ವರ್ಗಾವಣೆ(ಫಂಡಿಂಗ್) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಯ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ.
ತಿಮರೋಡಿ 11 ಮಂದಿ ಆಪ್ತರಲ್ಲಿ ಈಗಾಗಲೇ 6 ಮಂದಿಯನ್ನು ಎಸ್.ಐ.ಟಿ ಅಧಿಕಾರಿಗಳು ಕಚೇರಿಗೆ ಕರೆಸಿ ವಿಚಾರಣೆ ಮಾಡಿರುವುದಾಗಿ ತಿಳಿದು ಬಂದಿದೆ. ಉಳಿದ ಐದು ಮಂದಿಯನ್ನು ವಿಚಾರಣೆ ಮಾಡಲು ಬಾಕಿ ಇದ್ದು ಅವರು ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ಬ್ಯಾಂಕ್ ಖಾತೆಗಳ ಮೂಲಕವಾಗಿಯೇ ಹಣ ವರ್ಗಾವಣೆ ಮಾಡಲಾಗಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಳು ವಿಚಾರಣೆ ಯಿಂದ ಹೊರಬರಬೇಕಾಗಿದೆ.