Home ಬ್ರೇಕಿಂಗ್‌ ನ್ಯೂಸ್ ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯನ್ನು ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಿ ಆದೇಶ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯನ್ನು ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಿ ಆದೇಶ

0

ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ
ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು. ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ಸಲ್ಲಿಸಿದ ಕೋರಿಕೆಯನ್ನು ಮನ್ನಿಸಿ ಪುತ್ತೂರು ಎಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಮಾಡಿರುವುದಾಗಿ ತಿಳಿದು ಬಂದಿದೆ.

ಪುತ್ತೂರು ಸಹಾಯಕ ಆಯುಕ್ತರಾದ(ಎಸಿ) ಸ್ಟೆಲ್ಲಾ ವರ್ಗಿಸ್ ಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18 ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಮಾಡಿ ಆದೇಶ ಮಾಡಲಾಗಿರುವುದಾಗಿ ತಿಳಿದು ಬಂದಿದೆ

ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿರುವುದಾಗಿ ತಿಳಿದು ಬಂದಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version