ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದ್ದಾರೆ. ಕೋರ್ಟ್ ನಲ್ಲಿ ಚಿನ್ನಯ್ಯ ಪ್ರಕರಣದ ಬಗ್ಗೆ ವಿವರವಾಗಿ ನ್ಯಾಯಾಲಧೀಶರ ಮುಂದೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.
ಆರೋಪಿ ಚಿನ್ನಯ್ಯ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾ ವಿಜಯೇಂದ್ರ ಹೆಚ್.ಟಿ ಮುಂದೆ ಹಜರು ಪಟಿಸಿ ಹೇಳಿಕೆ ದಾಖಲಿಸುವ ಕಾರ್ಯ ಆರಂಭಿಸಲಾಗಿತ್ತು ಸಂಜೆ 6:30 ಗಂಟೆಗೆ ನ್ಯಾಯಾಲಯದ ಪ್ರಕ್ರಿಯೆಗಳನ್ನು ಮುಗಿಸಿ ಆತನನ್ನುವಾಪಸ್ ಶಿವಮೊಗ್ಗ ಜೈಲಿಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.
ಚಿನ್ನಯ್ಯನ ಹೇಳಿಕೆ ದಾಖಲಿಸುವ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ ಎಂದು ತಿಳಿದು ಬಂದಿದ್ದು ಸೆ.25 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡುವಂತೆ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ
